Close Menu
ತುಂಗಾಕಿರಣ ದೈನಂದಿನ ವಾರ್ತೆ
  • Home
  • Business
  • Career
  • E Newspaper
  • Education
  • Entertainment
  • Health & Fitness
  • Lifestyle
  • Others
  • Technology
  • Travel
  • Post
What's Hot

ವ್ಯಸನ ಮುಕ್ತ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

24/07/2025

ಯಶಸ್ವಿಯಾಗಿ ಜರುಗಿದ ಸುಜ್ಞಾನ ಸಂಗಮ ಕಾರ್ಯಕ್ರಮ

24/07/2025

ಯಶಸ್ವಿಯಾಗಿ ಜರುಗಿದ ಸುಜ್ಞಾನ ಸಂಗಮ ಕಾರ್ಯಕ್ರಮ

24/07/2025
Facebook X (Twitter) Instagram
Facebook X (Twitter) Instagram
ತುಂಗಾಕಿರಣ ದೈನಂದಿನ ವಾರ್ತೆತುಂಗಾಕಿರಣ ದೈನಂದಿನ ವಾರ್ತೆ
Post
  • Home
  • E-Paper
  • Business
  • Education
  • Career
  • Health
  • Lifestyle
  • Cyber Alerts
  • Technology
  • Travel
ತುಂಗಾಕಿರಣ ದೈನಂದಿನ ವಾರ್ತೆ
Home»Others»ವ್ಯಸನ ಮುಕ್ತ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
Others

ವ್ಯಸನ ಮುಕ್ತ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

tunga kiranaBy tunga kirana24/07/2025No Comments1 Min Read
Share Facebook Twitter Pinterest LinkedIn Tumblr Reddit Telegram Email
Share
Facebook Twitter LinkedIn Pinterest Email

ಕೊಪ್ಪಳ : ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಆಗಸ್ಟ್ ೧ ರಂದು ಆಚರಿಸುವ ವ್ಯಸನ ಮುಕ್ತ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ತಹಶಿಲ್ದಾರರ ನೇತೃತ್ವದಲ್ಲಿ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಗಸ್ಟ್ ೧ ರಂದು ಡಾ. ಮಹಾಂತ ಶಿವಯೋಗಿ ಜನ್ಮ ದಿನಾಚರಣೆ ಅಂಗವಾಗಿ ಆಚರಿಸುವ ವ್ಯಸನಮುಕ್ತ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಹಾಂತ ಶಿವಯೋಗಿಗಳು ಜನರ ದುಶ್ಚಟಗಳನ್ನು ಬಿಡಿಸಲು ಅವರು ಜೋಳಿಗಿ ಹಿಡಿದು ಅದರಲ್ಲಿ ಎಲ್ಲಾ ಕೆಟ್ಟ ಚಟಗಳನ್ನು ಹಾಕಿ ಎಂದು ಜನರಿಗೆ ಹೇಳುವ ಮೂಲಕ ಅವರನ್ನು ದುಶ್ಚಟಗಳಿಂದ ಮುಕ್ತರನ್ನಾಗಿ ಮಾಡಿ, ವ್ಯಸನ ಮುಕ್ತ ಆಂದೋಲನದ ಹರಿಕಾರರಾದರು. ಇಂತಹ ಮಹನೀಯರ ಜಯಂತಿ ಕಾರ್ಯಕ್ರಮ ಎಲ್ಲರೂ ಸೇರಿ ಆಚರಿಸುವ ಮೂಲಕ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ಹೋಗಬೇಕಿದೆ ಎಂದರು.
ಕಾಲೇಜುಗಳ ಮಕ್ಕಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕು. ಮಹಾಂತ ಶಿವಯೋಗಿಗಳ ಕುರಿತು ಮಾತನಾಡುವ ಒಳ್ಳೆಯ ಉಪನ್ಯಾಸಕರನ್ನು ಕರೆಸಿ ಅವರ ವಿಚಾರಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸ ಮಾಡಬೇಕು. ಮಧ್ಯಪಾನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಿಗೆ ತಿಳಿ ಹೇಳುವುದು ಇಂದಿನ ದಿನಮಾನಗಳಲ್ಲಿ ಬಹಳ ಅವಶ್ಯಕತೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಶ್ರೀಶೈಲ್ ಬಿರಾದಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ. ಸೇರಿದಂತೆ ಇತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email
Previous Articleಯಶಸ್ವಿಯಾಗಿ ಜರುಗಿದ ಸುಜ್ಞಾನ ಸಂಗಮ ಕಾರ್ಯಕ್ರಮ
tunga kirana
  • Website

Related Posts

Others

ಯಶಸ್ವಿಯಾಗಿ ಜರುಗಿದ ಸುಜ್ಞಾನ ಸಂಗಮ ಕಾರ್ಯಕ್ರಮ

24/07/2025
Others

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

21/07/2025
Others

ಗಂಗಾಮತ ಸಮಾಜಕ್ಕೆ ನೂತನ ಅಧ್ಯಕ್ಷರಾಗಿ ಹನುಮೇಶ ಬಟಾರಿ ಆಯ್ಕೆ

21/07/2025
Add A Comment
Leave A Reply Cancel Reply

Calendar
July 2025
M T W T F S S
 123456
78910111213
14151617181920
21222324252627
28293031  
     
Editors Picks
Latest Posts

Subscribe to Updates

Get the latest updates!

Calendar
July 2025
M T W T F S S
 123456
78910111213
14151617181920
21222324252627
28293031  
     

Your source for the serious news. This demo is crafted specifically to exhibit the use of the theme as a news site. Visit our main page for more demos.

We're social. Connect with us:

Facebook X (Twitter) Instagram Pinterest YouTube Tumblr LinkedIn WhatsApp

Subscribe to Updates

Get the latest updates!

Facebook X (Twitter) Instagram Pinterest
  • Home
  • Get a Website
© 2025 TungaKirana Designed by Mnemonics.

Type above and press Enter to search. Press Esc to cancel.